ಬೈಂದೂರು, ಆ.28: ತಾಲೂಕಿನ ಶಿರೂರು ಭಾಗದಲ್ಲಿ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ರವಿವಾರ ಸಂಜೆ ಅಳ್ವೆಗದ್ದೆಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಮೃತ ದುರ್ದೈವಿಗಳು.
ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಸಂಜೆ ಕೂಡ ಕೈರಂಪಣಿ ಮೀನುಗಾರಿಕೆಗೆ ತೆರಳಿದ್ದರು.

ಸಮುದ್ರ ಪ್ರಕ್ಷುಬ್ದ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಸಮುದ್ರ ಪಾಲಾಗಿದ್ದಾರೆ. ತಕ್ಷಣ ಇಲ್ಲಿನ ಸ್ಥಳೀಯ ಮೀನುಗಾರರು ಕಳೆಬರಹದ ಶೋಧಕ್ಕಾಗಿ ಪ್ರಯತ್ನಿಸಿದರು ಕೂಡ ಪತ್ತೆಯಾಗಿಲ್ಲ. ಶೋಧ ಕಾರ್ಯ ಮುಂದುವರಿದಿದೆ
ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ನಿರಂಜನ ಗೌಡ,ಅಗ್ನಿಶಾಮಕ ದಳ,ಕರಾವಳಿ ಕಾವಲು ಪಡೆ,ತಹಶೀಲ್ದಾರರು ಹಾಗೂ ಸ್ಥಳೀಯ ಮೀನುಗಾರರು ಹಾಜರಿದ್ದರು.
